NPS ತೊಲಗಲಿ, OPS ಬೆಳಗಲಿ. ಡಿಸೆಂಬರ್ 19 ಕ್ಕೆ ನಮ್ಮೆಲ್ಲರ ನಡೆ ಬೆಂಗಳೂರು ಕಡೆ. ಬೇಕೇ ಬೇಕು ಪಿಂಚಣಿ ಬೇಕು. ಸಾಕು ಸಾಕು NPS ಸಾಕು. ನಮ್ಮ ಹಾಗೂ ನಮ್ಮವರ ಭವಿಷ್ಯದ ಭದ್ರತೆಗಾಗಿ OPS ಬೇಕೇ ಬೇಕು

ಮಂಗಳವಾರ, ಸೆಪ್ಟೆಂಬರ್ 28, 2021

7th ವಿಜ್ಞಾನ ಪ್ರಶ್ನೋತ್ತರ.

 1. ಸಸ್ಯಗಳಲ್ಲಿ ಪೋಷಣೆ

ಅಭ್ಯಾಸಗಳು

1. ಜೀವಿಗಳು ಆಹಾರವನ್ನು ಏಕೆ ಸೇವಿಸಬೇಕು?

ಉ. ಜೀವಿಗಳು ಬದುಕಲು, ದೇಹದ ಬೆಳವಣಿಗೆಗೆ ಹಾಗೂ ಶಕ್ತಿಯನ್ನು ಪಡೆಯಲು ಆಹಾರವನ್ನು ಸೇವಿಸಬೇಕು.


2. ಪರಾವಲಂಬಿ ಮತ್ತು ಕೊಳೆತಿನಿ ಗಳ ನಡುವಿನ ವ್ಯತ್ಯಾಸವನ್ನು ತಿಳಿಸಿ.

ಉ.

ಪರಾವಲಂಬಿಗಳು  : ಪರಾವಲಂಬಿಗಳು ಸಸ್ಯಗಳಿಂದ ಆಹಾರವನ್ನು ಪಡೆಯುತ್ತವೆ.  ಉದಾ: ಪ್ರಾಣಿಗಳು

ಕೊಳೆತಿನಿಗಳು: ಕೊಳೆತಿನಿಗಳು ಸತ್ತ ಮತ್ತು ಕೊಳೆಯುತ್ತಿರುವ ವಸ್ತುಗಳಿಂದ ಆಹಾರವನ್ನು ಪಡೆದುಕೊಳ್ಳುತ್ತವೆ. ಉದಾ: ಶೀಲಿಂದ್ರಗಳು


4.  ಹಸಿರು ಸಸ್ಯಗಳಲ್ಲಿ ಆಹಾರ ಸಂಸ್ಕರಣ ಪ್ರಕ್ರಿಯೆಯ ಸಂಕ್ಷಿಪ್ತ ವಿವರಣೆ ಕೊಡಿ.

. ಎಲೆಗಳು ಕ್ಲೋರೋಫಿಲ್ ಎಂಬ ಹಸಿರು ವರ್ಣಿಕೆ ಯನ್ನು ಹೊಂದಿರುತ್ತವೆ. ಸೂರ್ಯನ ಬೆಳಕಿನಲ್ಲಿ ಇರುವ ಶಕ್ತಿಯನ್ನು ಹಿಡಿದಿಟ್ಟುಕೊಳ್ಳಲು ಅದು ಎಲೆಗಳಿಗೆ ಸಹಾಯವನ್ನು ಮಾಡುತ್ತದೆ. ಈ ಶಕ್ತಿಯು ಕಾರ್ಬನ್ ಡೈಯಾಕ್ಸೈಡ್ ಮತ್ತು ನೀರಿನಿಂದ ಆಹಾರವನ್ನು ಸಂಶ್ಲೇಷಿಸಲು ಬಳಕೆಯಾಗುತ್ತದೆ. ಸೂರ್ಯನ ಬೆಳಕಿನಲ್ಲಿ ಆಹಾರ ಸಂಶ್ಲೇಷಣೆ ನಡೆಯುತ್ತದೆ. ದ್ಯುತಿ ಸಂಶ್ಲೇಷಣ ಪ್ರಕ್ರಿಯೆ ನಡೆಯಲು ಕ್ಲೋರೋಫಿಲ್ , ಸೂರ್ಯನ ಬೆಳಕು,  ಕಾರ್ಬನ್ ಡೈಆಕ್ಸೈಡ್ ಮತ್ತು ನೀರು ಅವಶ್ಯಕ.


5. ಸಸ್ಯಗಳು ಆಹಾರ ಪ್ರಾಥಮಿಕ ಮೂಲಗಳು ಎಂಬುದನ್ನು ರೇಖಾಚಿತ್ರದ ಮೂಲಕ ತೋರಿಸಿ.




6. ಬಿಟ್ಟಸ್ಥಳ ತುಂಬಿ.

) ಎ). ತಮ್ಮ ಆಹಾರವನ್ನು ತಾವೇ ಸಂಶ್ಲೇಷಿಸುವುದರಿಂದ ಹಸಿರು ಸಸ್ಯಗಳನ್ನು............ ಎನ್ನುವರು.

 ಉ. ಸ್ವಪೋಷಕ


ಬಿ) ಸಸ್ಯಗಳಿಂದ ಸಂಶ್ಲೇಷಿಸಲ್ಪಟ್ಟ ಆಹಾರವು............ ರೂಪದಲ್ಲಿ ಸಂಗ್ರಹವಾಗುವುದು.

ಉ. ಪಿಷ್ಟ


ಸಿ). ದ್ಯುತಿ ಸಂಶ್ಲೇಷಣೆ ಯಲ್ಲಿ ಸೌರಶಕ್ತಿಯನ್ನು ಹಿಡಿದಿಟ್ಟುಕೊಳ್ಳುವ ವರ್ಣಕ............

ಉ. ಕ್ಲೋರೋಫಿಲ್ ( ಪತ್ರ ಹರಿತ್ತು)


ಡಿ.) ಸಸ್ಯಗಳು ದ್ಯುತಿ ಸಂಶ್ಲೇಷಣೆ ಯಲ್ಲಿ......... ಅನ್ನು ಒಳ ತೆಗೆದುಕೊಳ್ಳುತ್ತವೆ, ಮತ್ತು........... ಅನ್ನು ಬಿಡುಗಡೆ ಮಾಡುತ್ತವೆ.

ಉ. ಇಂಗಾಲದ ಡೈಆಕ್ಸೈಡ್ ------

      ಆಮ್ಲಜನಕ


7. . ಕೆಳಗಿನವುಗಳನ್ನು ಹೆಸರಿಸಿ.


I) ತೆಳುವಾದ ಕೊಳವೆಯಾಕಾರದ ಹಳದಿ ಬಣ್ಣದ ಕಾಂಡ ಬಂದಿರುವ ಪರಾವಲಂಬಿ ಸಸ್ಯ.

ಉ. ಕಸ್ಕ್ಯೂಟ


ii). ಭಾಗಶಃ ಸ್ವಪೋಷಿತ ಸಸ್ಯ

ಉ. ಕೀಟಾಹಾರಿ ಸಸ್ಯಗಳು


iii). ಎಲೆಗಳು ಅನಿಲ ವಿನಿಮಯ ನಡೆಸುವ ರಂದ್ರಗಳು.

ಉ. ಪತ್ರರಂದ್ರ


8. ಸರಿ ಉತ್ತರವನ್ನು ಗುರುತುಮಾಡಿ

ಎ. ಕಸ್ಕ್ಯೂಟ ಇದಕ್ಕೆ ಉದಾಹರಣೆ

ಉ. ಆತಿಥೇಯದ ಸಸ್ಯ.


ಬಿ. ಕೀಟಗಳನ್ನು ಹಿಡಿಯುವ ಮತ್ತು ತಿನ್ನುವ ಸಸ್ಯ

ಉ. ಹೂಜಿಗಿಡ


9. ಹೊಂದಿಸಿ ಬರೆಯಿರಿ.


       I.                                           II


ಕ್ಲೋರೋಫಿಲ್                       ಎಲೆ

ನೈಟ್ರೋಜನ್                        ಬ್ಯಾಕ್ಟೀರಿಯಾ

ಕಸ್ಕ್ಯೂಟ                             ಪರಾವಲಂಬಿ

ಪ್ರಾಣಿಗಳು                            ಪರಪೋಷಕಗಳು

ಕೀಟಗಳು                             ಹೂಜಿಗಿಡ


10. ಸರಿ , ತಪ್ಪು ಎಂದು ಗುರುತಿಸಿ

a. ದ್ಯುತಿ ಸಂಶ್ಲೇಷಣೆಯಲ್ಲಿ ಕಾರ್ಬನ್ ಡೈಆಕ್ಸೈಡ್ ಬಿಡುಗಡೆಯಾಗುತ್ತದೆ .

ಉ.  ತಪ್ಪು


b. ತಮ್ಮ ಆಹಾರವನ್ನು ತಾವೇ ಸಂಶ್ಲೇಷಿಸಿಕೊಳ್ಳುವ ಸಸ್ಯಗಳನ್ನು ಕೊಳೆತಿನಿಗಳು ಎನ್ನುವರು.

ಉ. ತಪ್ಪು


c. ದ್ಯುತಿ ಸಂಶ್ಲೇಷಣೆ ಯು ಅನ್ನವು ಪ್ರೋಟೀನ್ ಅಲ್ಲ

ಉ. ಸರಿ


d. ಜ್ಯೋತಿ ಸಂಶ್ಲೇಷಣೆಯಲ್ಲಿ ಸೌರಶಕ್ತಿಯು ರಾಸಾಯನಿಕ ಶಕ್ತಿಯಾಗಿ ಪರಿವರ್ತನೆಯಾಗುತ್ತದೆ

ಉ. ಸರಿ


11. ಸರಿ ಉತ್ತರ ಆರಿಸಿ ಬರೆಯಿರಿ


ದ್ಯುತಿ ಸಂಶ್ಲೇಷಣೆಗಾಗಿ ವಾತಾವರಣದಿಂದ ಕಾರ್ಬನ್ ಡೈಆಕ್ಸೈಡ್ ಅನ್ನು ಸಸ್ಯದ ಯಾವ ಭಾಗ ತೆಗೆದುಕೊಳ್ಳುತ್ತದೆ.

ಉ. ಬಿ.) ಪತ್ರರಂದ್ರಗಳು


12. ಕೆಳಗಿನವುಗಳನ್ನು ಸರಿ ಉತ್ತರ ಆರಿಸಿ

ವಾತಾವರಣದಿಂದ ಕಾರ್ಬನ್ ಡೈ ಆಕ್ಸೈಡ್ ಅನ್ನು ಸಸ್ಯಗಳು ವಾಗಿ ಇವುಗಳ ಮೂಲಕ ಒಳ ತೆಗೆದುಕೊಳ್ಳುತ್ತವೆ.

ಉ. ಎಲೆಗಳು


13. ಬಹಳಷ್ಟು ಹಣ್ಣು ಮತ್ತು ತರಕಾರಿ ಸಸ್ಯಗಳನ್ನು ರೈತರು ದೊಡ್ಡದಾದ ಹಸಿರುಮನೆಗಳಲ್ಲಿ ಏಕೆ ಬೆಳೆಯುತ್ತಾರೆ ? ಇದರಿಂದ ರೈತರಿಗೆ ಆಗುವ ಅನುಕೂಲಗಳೇನು ?

ಉ. ಹಸಿರುಮನೆಗಳು ಉತ್ತಮ ವಾತಾವರಣ ಒದಗಿಸುತ್ತವೆ.

ಅನಾನುಕೂಲ ವಾತಾವರಣದಿಂದ ರಕ್ಷಿಸುತ್ತದೆ.

ಪ್ರಾಣಿ ಪಕ್ಷಿಗಳು ಮತ್ತು ಕ್ರಿಮಿಕೀಟಗಳಿಂದ ರಕ್ಷಣೆ ಸಿಗುತ್ತದೆ.

ಹೆಚ್ಚಾದ ಮಳೆ ಗಾಳಿ ಬಿಸಿಲಿನಿಂದ ರಕ್ಷಣೆ ಸಿಗುತ್ತದೆ. ಎಲ್ಲ ಕಾರಣಗಳಿಂದ ರೈತರು ಹಸಿರುಮನೆಗಳಲ್ಲಿ ಹೆಚ್ಚು ಇಳುವರಿ ಪಡೆಯುತ್ತಾರೆ


 ಸಮಾಲೋಚನಾ ಸಭೆ LINKS

ಭಾನುವಾರ, ಸೆಪ್ಟೆಂಬರ್ 26, 2021

6th ವಿಜ್ಞಾನ, 7 ಸಸ್ಯಗಳನ್ನು ತಿಳಿಯುವುದು.

 7. ಸಸ್ಯಗಳನ್ನು ತಿಳಿಯುವುದು

ಅಭ್ಯಾಸಗಳು


1. ಈ ಕೆಳಗಿನ ಹೇಳಿಕೆಗಳನ್ನು ಸರಿಪಡಿಸಿ ಬರೆಯಿರಿ.

ಎ) ಮಣ್ಣಿನಲ್ಲಿರುವ ನೀರು ಮತ್ತು ಖನಿಜಗಳನ್ನು ಕಾಂಡ ಇರುತ್ತದೆ.

ಉ. ಮಣ್ಣಿನಲ್ಲಿರುವ ನೀರು ಮತ್ತು ಖನಿಜಗಳನ್ನು ಬೇರು ಹೀರುತ್ತದೆ.


ಬಿ. ಎಲೆಗಳು ಸಸ್ಯವನ್ನು ನೇರವಾಗಿ ನಿಲ್ಲುವಂತೆ ಹಿಡಿದಿಡುತ್ತವೆ.

. ಬೇರುಗಳು ಸಸ್ಯವನ್ನು ನೇರವಾಗಿ ನಿಲ್ಲುವಂತೆ ಹಿಡಿದಿಡುತ್ತವೆ.


ಸಿ. ಬೇರುಗಳು ಎಲೆಗಳಿಗೆ ನೀರನ್ನು ಸಾಗಿಸುತ್ತವೆ.

ಉ. ಕಾಂಡವು ಎಲೆಗಳಿಗೆ ನೀರನ್ನು ಸಾಗಿಸುತ್ತದೆ.


ಡಿ. ಒಂದು ಹೂವಿನಲ್ಲಿ ಪುಷ್ಪದಳ ಮತ್ತು ಕೇಸರಗಳ ಸಂಖ್ಯೆ ಯಾವಾಗಲೂ ಸಮ.

ಉ. ಒಂದು ಹೂವಿನಲ್ಲಿ ಪುಷ್ಪದಳ ಮತ್ತು ಕೇಸರಗಳ ಸಂಖ್ಯೆ ಬೇರೆ ಬೇರೆಯಾಗಿರುತ್ತದೆ.


ಇ. ಒಂದು ಹೂವಿನಲ್ಲಿ ಪುಷ್ಪ ಪತ್ರಗಳು ಒಟ್ಟಿಗೆ ಸೇರಿದ್ದರೆ, ಅದರ ಪುಷ್ಪದಳಗಳು ಸಹ ಒಟ್ಟಿಗೆ ಸೇರಿರುತ್ತವೆ.

ಉ. ಒಂದು ಹೂವಿನಲ್ಲಿ ಪುಷ್ಪ ಪತ್ರಗಳು ಒಟ್ಟಿಗೆ ಸೇರಿದ್ದರೆ, ಅದರ ಪುಷ್ಪದಳಗಳು ಒಟ್ಟಿಗೆ ಸೇರಿರುವುದಿಲ್ಲ.


ಎಫ್. ಒಂದು ಹೂವಿನಲ್ಲಿ ಪುಷ್ಪದಳಗಳು ಒಟ್ಟಿಗೆ ಸೇರಿದ್ದರೆ, ಆಗ  ಶಲಾಕೆಯು ಪುಷ್ಪದಳಕ್ಕೆ ಸೇರಿಕೊಂಡಿರುತ್ತದೆ.

ಉ. ಒಂದು ಹೂವಿನಲ್ಲಿ ಪುಷ್ಪದಳಗಳು ಒಟ್ಟಿಗೆ ಸೇರಿದ್ದರೆ, ಆಗ ಅಂಡಾಶಯಕ್ಕೆ ಸೇರಿಕೊಂಡಿರುತ್ತದೆ.


2. ಕೋಷ್ಟಕ 7.3 ರಲ್ಲಿ ನೀವು ಅಧ್ಯಯನ ಮಾಡಿದಂತೆ ಎ.)ಒಂದು ಎಲೆ ಬಿ.) ತಾಯಿಬೇರು ಮತ್ತು ಸಿ) ಒಂದು ಹೂವಿನ ಚಿತ್ರವನ್ನು ರಚಿಸಿ





3. ನಿಮ್ಮ ಮನೆ ಅಥವಾ ನಿಮ್ಮ ಅಕ್ಕಪಕ್ಕದಲ್ಲಿ ಎತ್ತರವಾಗಿರುವ ಆದರೆ ದುರ್ಬಲ ಕಾಂಡವಿರುವ ಒಂದು ಸಸ್ಯವನ್ನು ಕಾಣಬಲ್ಲಿರಾ ? ಅದರ ಹೆಸರು ಬರೆಯಿರಿ. ಇದನ್ನು ಯಾವ ಗುಂಪಿಗೆ ವರ್ಗೀಕರಿಸುವಿರಿ.

ಉ. ತುಳಸಿ. ---  ಗಿಡಮೂಲಿಕೆ.


4. ಕಾಂಡದ ಕಾರ್ಯವೇನು?

ಉ. *ಕಾಂಡವು ನೀರು ಮತ್ತು ಖನಿಜಾಂಶಗಳನ್ನು ಮೇಲೆರುವುದಕ್ಕೆ ಸಹಾಯ ಮಾಡುತ್ತದೆ.

* ಕಾಂಡವು ಸಸ್ಯಕ್ಕೆ ಆಧಾರವನ್ನು ಒದಗಿಸುತ್ತದೆ.


5. ಈ ಕೆಳಗಿನ ಯಾವ ಎಲೆಗಳಲ್ಲಿ ಜಾಲಿಕಾರೂಪ ಸಿರ ವಿನ್ಯಾಸವಿದೆ.

ಗೋದಿ,ತುಳಸಿ, ಮೆಕ್ಕೆಜೋಳ, ಕೋತಂಬರಿ,ಚೀನಾ ಗುಲಾಬಿ.

ಉ. ಕೋತಂಬರಿ, ಗುಲಾಬಿ, ತುಳಸಿ.


6. ಒಂದು ಸಸ್ಯಕ್ಕೆ ತಂತು ಬೇರಿದ್ದರೆ, ಅದರ ಎಲೆಗಳಲ್ಲಿ ಯಾವ ಬಗೆಯ ಸಿರಾ ವಿನ್ಯಾಸವಿರುತ್ತದೆ ?

ಉ. ಸಮಾನಾಂತರ ಸಿರ ವಿನ್ಯಾಸ


7. ಒಂದು ಸಸ್ಯದ ಎಲೆಗಳಲ್ಲಿ ಜಾಲಿಕಾರೂಪ ಸಿರ ವಿನ್ಯಾಸವಿದ್ದರೆ ಅದರಲ್ಲಿ ಯಾವ ಬಗೆಯ ಬೇರು ಇರುತ್ತದೆ?

ಉ. ತಾಯಿಬೇರು


8. ಕಾಗದದ ಹಾಳೆಯ ಮೇಲಿರುವ ಎಲೆಯ ಅಚ್ಚನ್ನು ನೋಡಿ ಅದರ ಸಸ್ಯದಲ್ಲಿ ತಾಯಿಬೇರು ಇದೆಯೇ ಅಥವಾ ತಂತು ಬೇರು ಇದೆಯೇ ಎಂದು ಕಂಡುಹಿಡಿಯಲು ನಿಮಗೆ ಸಾಧ್ಯವೇ?

ಉ. ಸಾಧ್ಯವಿದೆ. 

ಎಲೆಯಲ್ಲಿ ಜಾಲಿಕಾ ರೂಪ ಸಿರ ವಿನ್ಯಾಸವಿದ್ದರೆ ಸಸ್ಯ ತಾಯಿಬೇರು ಹೊಂದಿದೆ.

ಎದೆಯಲ್ಲಿ ಸಮಾನಾಂತರ ಸಿರಾ ವಿನ್ಯಾಸವಿದ್ದರೆ ಸಸ್ಯ ತಂತು ಬೇರು ಹೊಂದಿದೆ.


9. ಹೂವಿನ ಭಾಗಗಳು ಯಾವುವು?

ಉ. ತೊಟ್ಟು ,  ಪುಷ್ಪ ಪತ್ರ , ಪುಷ್ಪದಳ , ಕೇಸರ ದಂಡ, ಕೇಸರಗಳು, ಶಲಾಕಾಗ್ರ, ಅಂಡಾಶಯ.


11. ಆಹಾರವನ್ನು ತಯಾರಿಸುವ ಸಸ್ಯದ ಭಾಗ ಮತ್ತು ಪ್ರಕ್ರಿಯೆಯನ್ನು ಹೆಸರಿಸಿ.

ಉ. ಆಹಾರವನ್ನು ತಯಾರಿಸುವ ಸಸ್ಯದ ಭಾಗ ಎಲೆ.

ಆಹಾರ ತಯಾರಿಸುವ ಪ್ರಕ್ರಿಯೆಯನ್ನು ದ್ಯುತಿಸಂಶ್ಲೇಷಣೆ ಕ್ರಿಯೆ ಎನ್ನುವರು.


12. ಹೂವಿನ ಯಾವ ಭಾಗದಲ್ಲಿ ನೀವು ಅಂಡಾಶಯವನ್ನು ಕಾಣುತ್ತೀರಿ

ಉ.ಶಲಾಕಾಗ್ರದ ಅತ್ಯಂತ ಕೆಳಭಾಗ ಮತ್ತು ಉಬ್ಬಿದ ಭಾಗವೇ ಅಂಡಾಶಯ.


13. ಪುಷ್ಪ ಪತ್ರಗಳು ಪ್ರತ್ಯೇಕ ವಿರುವ ಮತ್ತು ಪುಷ್ಪಪತ್ರ ಸೇರಿರುವ ಎರಡು ಸಸ್ಯಗಳನ್ನು ಹೆಸರಿಸಿ.

ಉ. ಪುಷ್ಪಪತ್ರ ಪ್ರತ್ಯೇಕ ವಿರುವ ಸಸ್ಯಗಳು- ಮಲ್ಲಿಗೆ, ಕನಕಾಂಬರ, 

ಪಾಪ ಸೇರಿರುವ ಸಸ್ಯಗಳು- ದಾಸವಾಳ, ಗುಲಾಬಿ, ಸೇವಂತಿಗೆ.


6th ವಿಜ್ಞಾನ, 6 ನಮ್ಮ ಸುತ್ತಲಿನ ಬದಲಾವಣೆಗಳು

 6. ನಮ್ಮ ಸುತ್ತಲಿನ ಬದಲಾವಣೆಗಳು

########### ಅಭ್ಯಾಸಗಳು ###########

1. ಜಲಾವೃತ ಪ್ರದೇಶದ ಮೂಲಕ ನಡೆಯುವಾಗ ಸಾಮಾನ್ಯವಾಗಿ ನಿಮ್ಮ ಉಡುಪನ್ನು ಮಡಚಿ ಚಿಕ್ಕದಾಗಿಸುವಿರಿ. ಈ ಬದಲಾವಣೆಯನ್ನು  ಪರಾವರ್ತ ಗೊಳಿಸಬಹುದೇ?

ಉ. ಹೌದು


2. ನಿಮಗೆ ಇಷ್ಟವಾದ ಆಟಿಕೆಯನ್ನು ನೀವು ಆಕಸ್ಮಿಕವಾಗಿ ಬೀಳಿಸಿ ಹೊಡೆದು ಹಾಕಿದಿರಿ. ಇದು ನೀವು ಬಯಸದ ಬದಲಾವಣೆ. ಈ ಬದಲಾವಣೆಯನ್ನು ಪರಾವರ್ತಗೊಳಿಸಬಹುದೆ?

ಉ. ಇಲ್ಲ.


3. ಕೆಲವು ಬದಲಾವಣೆಗಳನ್ನು ಕೋಷ್ಟಕದಲ್ಲಿ ಪಟ್ಟಿಮಾಡಲಾಗಿದೆ. ಪ್ರತಿ ಬದಲಾವಣೆಯು ಪರಾವರ್ತವೋ, ಅಲ್ಲವೋ ಎಂಬುದನ್ನು ಬರೆಯಿರಿ

   ಬದಲಾವಣೆ                   ಪರಾವರ್ತ ಗೊಳಿಸಬಹುದೇ?


೧. ಮರದ ತುಂಡನ್ನು ಕತ್ತರಿಸುವುದು-----         ಇಲ್ಲ

೨. ಐಸ್ ಕ್ಯಾಂಡಿ ಕರಗುವಿಕೆ --------------          ಇಲ್ಲ

೩. ನೀರಿನಲ್ಲಿ ಸಕ್ಕರೆಯನ್ನು ಕರಗಿಸುವುದು--     ಇಲ್ಲ

೪. ಆಹಾರವನ್ನು ಬೇಯಿಸುವುದು.---------       ಇಲ್ಲ

೫. ಮಾವಿನಕಾಯಿ ಹಣ್ಣಾಗುವುದು.--------       ಇಲ್ಲ

೬. ಹಾಲು ಮೊಸರಾಗುವುದು--------------          ಇಲ್ಲ.


4. ಡ್ರಾಯಿಂಗ್ ಹಾಳೆಯ ಮೇಲೆ ನೀವು ಚಿತ್ರವನ್ನು ಬಿಡಿಸಿದಾಗ ಆ ಹಾಳೆಯು ಬದಲಾವಣೆಯಾಗುತ್ತದೆ.

ನೀವು ಈ ಬದಲಾವಣೆಯನ್ನು ಪರಾವರ್ತಗೊಳಿಬಹುದೇ?

ಉ. ಇಲ್ಲ.


5. ಪರಾವರ್ತಗೊಳಿಸಬಹುದಾದ ಮತ್ತು ಪರಾವರ್ತಗೊಳಿಸಲಾಗದ ಬದಲಾವಣೆಗಳ ನಡುವಿನ ವ್ಯತ್ಯಾಸಗಳನ್ನು ಉದಾಹರಣೆಗಳೊಂದಿಗೆ ವಿವರಿಸಿ.

ಉ. 

* ನೀರಿಗೆ ತಂಪು ನೀಡಿದಾಗ ಮಂಜು ಗಡ್ಡೆಯಾಗುತ್ತದೆ.

ಅದೇ ಮಂಜುಗಡ್ಡೆ ಗೆ ಶಾಖ ನೀಡಿದಾಗ ನೀರಾಗುತ್ತದೆ.


* ಹಾಲಿನಿಂದ ತಯಾರಾಗುತ್ತದೆ. ಆದರೆ ಮೊಸರಿನಿಂದ ಹಾಲು ಮಾಡಲು ಬರುವುದಿಲ್ಲ.

ಕೆಲವು ವಸ್ತುಗಳನ್ನು ಪರಾವರ್ತ ಗೊಳಿಸಬಹುದು ಮತ್ತು ಕೆಲವು ವಸ್ತುಗಳನ್ನು ಪರಿವರ್ತಿಸಲು ಬರುವುದಿಲ್ಲ.

ನೀರಿಗೆ ತಂಪು ನೀಡಿ ಮಂಜುಗಡ್ಡೆ ಮಾಡಿ ಶಾಖದಿಂದ ಪುನಃ ನೀರನ್ನು ಪಡೆಯಬಹುದು. ಆದರೆ ಹಾಲಿನಿಂದ ಮೊಸರು ಮಾಡಿ ಪುನಃ ಹಾಲು ಪಡೆಯಲು ಬರುವುದಿಲ್ಲ.


6. ಮುರಿದ ಮೂಳೆಯ ಮೇಲೆ ಪ್ಲಾಸ್ಟರ್ ಆಫ್ ಪ್ಯಾರಿಸ್ ನ(pop) ದಪ್ಪ ಪದರವನ್ನು ಲೇಪಿಸಲಾಗಿದೆ. ಒಣಗಿದಾಗ ಅದು ಗಟ್ಟಿಯಾಗಿ ಮುರಿದ ಮೂಳೆ ಅಲುಗಾಡದಂತೆ ಮಾಡುತ್ತದೆ. ಪ್ಲಾಸ್ಟರ್ ಆಫ್ ಪ್ಯಾರೀಸ್ ನಲ್ಲಿ ಆದ ಬದಲಾವಣೆಯನ್ನು ಪರಾವರ್ತ ಗೊಳಿಸಬಹುದೆ?

ಉ. ಇಲ್ಲ


7. ತೆರೆದ ಸ್ಥಳದಲ್ಲಿರುವ ಒಂದು ಸಿಮೆಂಟಿನ ಚೀಲವು ರಾತ್ರಿ ಸುರಿದ ಮಳೆಯಿಂದ ಒದ್ದೆಯಾಗುತ್ತದೆ. ಮರುದಿನ ಆ ಸೂರ್ಯನು ಪ್ರಕಾರವಾಗಿ ಹೊಳೆಯುತ್ತಾನೆ. ಸಿಮೆಂಟಿನಲ್ಲಿ ಆದ ಬದಲಾವಣೆಗಳನ್ನು ಪರಾವರ್ತಗೊಳಿಸಬಹುದು ಎಂದು ನೀವು ಯೋಚಿಸುವಿರಾ?

ಉ. ಸಿಮೆಂಟ್ ನಲ್ಲಿ ಆದ ಬದಲಾವಣೆಯನ್ನು ಪರಾವರ್ತ ಗೊಳಿಸಲು ಬರುವುದಿಲ್ಲ.


6th ವಿಜ್ಞಾನ, ೫, ಪದಾರ್ಥಗಳನ್ನು ಬೇರ್ಪಡಿಸುವುದು. ಪ್ರಶ್ನೋತ್ತರ

 5. ಪದಾರ್ಥಗಳನ್ನು ಬೇರ್ಪಡಿಸುವಿಕೆ

**************  ಅಭ್ಯಾಸಗಳು **************

1. ಒಂದು ಮಿಶ್ರಣದ ವಿವಿಧ ಘಟಕಗಳನ್ನು ನಾವು ಏಕೆ ಬೇರ್ಪಡಿಸಬೇಕು? ಉದಾಹರಣೆಗಳನ್ನು ಕೊಡಿ.

ಉ.  *ಎರಡು ಪ್ರತ್ಯೇಕ, ಆದರೆ ಉಪಯುಕ್ತವಾದ ಘಟಕಗಳನ್ನು ಬೇರ್ಪಡಿಸಲು. 

* ಉಪಯುಕ್ತವಲ್ಲದ ಘಟಕಗಳನ್ನು ತೆಗೆಯಲು

* ಅಶುದ್ಧ ಕಾರಕ ಅಥವಾ ಹಾನಿಕಾರಕ ಘಟಕಗಳನ್ನು ಬೇರ್ಪಡಿಸುವುದು

ಉದಾ. ೧. ಬೆಣ್ಣೆಯನ್ನು ತಡೆಯಲು ಮೊಸರನ್ನು ಕಡೆಯುವುದು.

          ೨. ಜೋಳದಲ್ಲಿ ನ ಕಸವನ್ನು ಬೇರ್ಪಡಿಸುವುದು.


2. ತೋರುವಿಕೆ ಎಂದರೇನು? ಇದನ್ನು ಎಲ್ಲಿ ಬಳಸುವರು?

ಉ. ಬೀಸುವ ಗಾಳಿಯ ಸಹಾಯದಿಂದ ಒಂದು ಮಿಶ್ರಣ ದಲ್ಲಿರುವ ಭಾರವಾದ ಮತ್ತು ಹಗುರವಾದ ಘಟಕಗಳನ್ನು ಬೇರ್ಪಡಿಸುವ ವಿಧಾನವೇ ತೋರುವಿಕೆ.

ಈ ವಿಧಾನವನ್ನು ಧಾನ್ಯದ ಕಾಳಿನಿಂದ ಹಗುರವಾದ ಹೊಟ್ಟಿನ ಕಣಗಳನ್ನು ಬೇರ್ಪಡಿಸಲು ರೈತರು ಅನುಸರಿಸುತ್ತಾರೆ.


3. ಬೇಯಿಸುವ ಮುನ್ನ ಬೇಳೆಯಲ್ಲಿರುವ ಹೊಟ್ಟು ಅಥವಾ ಧೂಳಿನ ಕಣಗಳನ್ನು ಬೇರ್ಪಡಿಸುವ.

ಉ. ತೂರುವಿಕೆಯ ವಿಧಾನದ ಮೂಲಕ


4. ಜರಡಿ ಹಿಡಿಯುವಿಕೆ ಎಂದರೇನು? ಇದನ್ನು ಎಲ್ಲಿ ಬಳಸುವರು.

ಉ. ಮಿಶ್ರಣದಲ್ಲಿರುವ ವಿವಿಧ ಗಾತ್ರದ ಕಣಗಳನ್ನು ಬೇರ್ಪಡಿಸುವ ವಿಧಾನವೇ ಜರಡಿ ಹಿಡಿಯುವಿಕೆ.

*ಜೋಳ ಗೋಧಿಯಲ್ಲಿರುವ ಹೊಟ್ಟು ಮತ್ತು ಕಲ್ಲುಗಳನ್ನು ಬೇರ್ಪಡಿಸಲು

* ಮರಳಿ ನಲ್ಲಿರುವ ವಿವಿಧ ಗಾತ್ರಗಳನ್ನು ಕಲ್ಲುಗಳನ್ನು ಬೇರ್ಪಡಿಸಲು

* ಹಿಟ್ಟಿನಲ್ಲಿರುವ ಹೊಟ್ಟನ್ನು ಬೇರ್ಪಡಿಸಲು.


5. ಮರಳು ಮತ್ತು ನೀರನ್ನು ಅವುಗಳ ಮಿಶ್ರಣದಿಂದ ಹೇಗೆ ಬೇರ್ಪಡಿಸುವುದು?

ಉ. ಗುರುತ್ವ ಬಲ, ಬಸಿಯುವಿಕೆ ಮತ್ತು ಸೋಸುವಿಕೆ


6. ಗೋಧಿ ಹಿಟ್ಟಿನಲ್ಲಿ ಮಿಶ್ರಣ ಗೊಂಡಿರುವ ಸಕ್ಕರೆಯನ್ನು ಬೇರೆ ಮಾಡಲು ಸಾಧ್ಯವೇ? ಹೌದು ಎಂದಾದರೆ, ಹೇಗೆ ಮಾಡುವಿರಿ?

ಉ. ಹೌದು

ಜರಡಿ ಹಿಡಿಯುವುದರ ಮೂಲಕ ಗೋಧಿ ಹಿಟ್ಟು ಹಾಗೂ ಸಕ್ಕರೆಯ ಮಿಶ್ರಣವನ್ನು ಬೇರ್ಪಡಿಸಲು ಸಾಧ್ಯ.


7. ಮಣ್ಣು ಮಿಶ್ರಿತ ನೀರಿನ ಮಾದರಿಯಿಂದ ಸ್ವಚ್ಛ ನೀರನ್ನು ಹೇಗೆ ಪಡೆಯುವಿರಿ.

ಉ. ಸೋಸುವಿಕೆ ಯ ವಿಧಾನದ ಮೂಲಕ.


8. ಬಿಟ್ಟ ಸ್ಥಳ ತುಂಬಿರಿ

ಎ. ಪೈರಿನಿಂದ ಭತ್ತದ ಕಾಳುಗಳನ್ನು ಬೇರ್ಪಡಿಸುವ ವಿಧಾನವನ್ನು................ ಎನ್ನುವರು.

ಉ. ಬಡಿಯುವಿಕೆ


ಬಿ. ಕುದಿಸಿ ಆರಿಸಿದ ಹಾಲನ್ನು ಬಟ್ಟೆಯ ತುಂಡಿಗೆ ಸುರಿದು ಅದರ ಮೇಲೆ ಉಳಿದುಕೊಳ್ಳುತ್ತದೆ. ಹಾಲಿನಿಂದ ಕೆನೆಯನ್ನು ಪ್ರತ್ಯೇಕಿಸುವ ಈ ಕ್ರಿಯೆ..........ಗೆ ಉದಾಹರಣೆಯಾಗಿದೆ.

ಉ. ಸೋಸುವಿಕೆ


ಸಿ. ಸಮುದ್ರದ ನೀರಿನಿಂದ ಉಪ್ಪನ್ನು.......... ಕ್ರಿಯೆಯಿಂದ ಪಡೆಯುವರು

ಉ. ಆವಿಕರಣ


ಡಿ. ಒಂದು ಬಕೆಟ್ ನಲ್ಲಿ ಮಣ್ಣು ಮಿಶ್ರಿತ ನೀರನ್ನು ಇಡೀ ರಾತ್ರಿ ಇಟ್ಟಾಗ ಅಶುದ್ಧ ಕಾರಕಗಳು ತಳದಲ್ಲಿ ಕೆಳಗಡೆ ಸಂಗ್ರಹಗೊಂಡವು. ಆ ನಂತರ ಸ್ವಚ್ಛ ನೀರನ್ನು ಮೇಲಿಂದ ಬಸಿಯಲಾಯಿತು ಈ ಉದಾಹರಣೆಯಲ್ಲಿ ಬೇರ್ಪಡಿಸುವ ಕ್ರಿಯೆಯನ್ನು......... ಎನ್ನುವರು.

ಉ. ಗುರುತ್ವ ಬಲದಿಂದ ಬೇರ್ಪಡಿಸುವಿಕೆ ಮತ್ತು  ಬಸಿಯುವಿಕೆ


9.ಸರಿ ಅಥವಾ ತಪ್ಪು ಎಂದು ಗುರುತಿಸಿ

ಎ. ಹಾಲು ಮತ್ತು ನೀರಿನ ಮಿಶ್ರಣವನ್ನು ಸೋರಿಕೆಯಿಂದ ಬೇರ್ಪಡಿಸಬಹುದು

----- ತಪ್ಪು

ಬಿ. ಉಪ್ಪು ಮತ್ತು ಸಕ್ಕರೆಯ ಪುಡಿ ಮಾಡಿದ ಮಿಶ್ರಣವನ್ನು ತೋರುವಿಕೆ ಕ್ರಿಯೆಯಿಂದ ಬೇರ್ಪಡಿಸಬಹುದು.

----- ತಪ್ಪು

ಸಿ. ಚಹಾ ಸಕ್ಕರೆಯನ್ನು ಬೇರ್ಪಡಿಸಲು ಸೋರುವಿಕೆಯನ್ನು ಬಳಸಬಹುದು.

---- ತಪ್ಪು

ಡಿ. ಧಾನ್ಯ ಮತ್ತು ಹೊಟ್ಟನ್ನು ಬಸಿಯುವಿಕೆ ಕ್ರಿಯೆಯಿಂದ ಬೇರ್ಪಡಿಸಬಹುದು

---- ತಪ್ಪು

    

ಶನಿವಾರ, ಸೆಪ್ಟೆಂಬರ್ 25, 2021

6th ವಿಜ್ಞಾನ .4. ವಸ್ತುಗಳನ್ನು ಗುಂಪುಗಳಾಗಿ ವರ್ಗಿಕರಿಸುವುದು.

4 .ಪದಾರ್ಥಗಳನ್ನು ಗುಂಪುಗಳಾಗಿ ವರ್ಗೀಕರಿಸುವುದು


1. ಮರದಿಂದ ತಯಾರಿಸಬಹುದಾದ ಐದು ವಸ್ತುಗಳನ್ನು ಹೆಸರಿಸಿ.

ಉತ್ತರ. ಮೇಜು, ಕುರ್ಚಿ ,ಬಾಗಿಲು ಅಲಂಕಾರಿಕ ವಸ್ತುಗಳು, ಆಟಿಕೆ ಸಾಮಾನುಗಳು.


2. ಕೆಳಗಿನವುಗಳಲ್ಲಿ ಹೊಳೆಯುವ ವಸ್ತುಗಳನ್ನು ಆರಿಸಿ.

ಗಾಜಿನ ಪಾತ್ರೆ, ಪ್ಲಾಸ್ಟಿಕ್ ಆಟಿಕೆ, ಸ್ಟೀಲ್ ಚಮಚ, ಹತ್ತಿಯ ಅಂಗಿ.

ಉತ್ತರ.  ಪ್ಲಾಸ್ಟಿಕ್ ಪಾತ್ರೆ, ಸ್ಟೀಲ್ ಚಮಚ.


3. ಹೊಂದಿಸಿ ಬರೆಯಿರಿ.

ವಸ್ತು ಗಳು                  ಪದಾರ್ಥಗಳು

ಪುಸ್ತಕ.                         ಕಾಗದ

ಪಾತ್ರೆ /ಲೋಟ.             ಗಾಜು

ಕುರ್ಚಿ                          ಮರ

ಆಟಿಕೆ                         ಪ್ಲಾಸ್ಟಿಕ್

ಶೂಗಳು                      ಚರ್ಮ



4. ಕೆಳಗಿನ ಹೇಳಿಕೆಗಳು ಸರಿ ಅಥವಾ ತಪ್ಪು ಎಂದು ಗುರುತಿಸಿ.

i. ಪಾರದರ್ಶಕ ಆದರೆ ಗಾಜು ಅಪಾರದರ್ಶಕ. -- ತಪ್ಪು


ii. ನೋಟ್ ಪುಸ್ತಕಕ್ಕೆ ಹೊಳಪಿದೆ ಆದರೆ ಅಳಿಸುವ ರಬ್ಬರಿಗೆ ಹೊಳಪಿಲ್ಲ. -- ಸರಿ


iii. ಸೀಮೆ ಸುಣ್ಣ ನೀರಿನಲ್ಲಿ ಕರಗುತ್ತದೆ. -- ತಪ್ಪು


iv. ಒಂದು ಮರದ ತುಂಡು ನೀರಿನ ಮೇಲೆ ತೇಲುತ್ತದೆ. -- ಸರಿ


v. ಸಕ್ಕರೆಯು ನೀರಿನಲ್ಲಿ ಕರಗುವುದಿಲ್ಲ. -- ತಪ್ಪು


vi. ಎಣ್ಣೆ ನೀರಿನಲ್ಲಿ ಬೆರೆಯುತ್ತದೆ. -- ತಪ್ಪು


vii. ಮರಳು ನೀರಿನ ತಳದಲ್ಲಿ ಸಂಗ್ರಹವಾಗುತ್ತದೆ-- ಸರಿ


viii. ವಿನೆಗರ್ ನೀರಿನಲ್ಲಿ ಕರಗುತ್ತದೆ-- ತಪ್ಪು.



6. ನೀರಿನಲ್ಲಿ ತೇಲುವ ಎಲ್ಲಾ ವಸ್ತುಗಳನ್ನು ಪಟ್ಟಿ ಮಾಡಿ.

ಉತ್ತರ. ಹಾಳೆ,, ಕಟ್ಟಿಗೆ, ಪ್ಲಾಸ್ಟಿಕ್, ಸ್ಪಂಜು, ಥರ್ಮಾಕೋಲ್, ಇದ್ದಿಲು, 


7. ಗುಂಪಿಗೆ ಸೇರದ ಪದವನ್ನು ಗುರುತಿಸಿ.

ಎ. ಕುರ್ಚಿ, ಹಾಸಿಗೆ, ಟೇಬಲ್, ಮಗು, ಕಪಾಟು

> ಮಗು


ಬಿ. ಗುಲಾಬಿ, ಮಲ್ಲಿಗೆ, ಚಂಡು ಹೂವು, ದೋಣಿ, ಕಮಲ

> ದೋಣಿ


ಸಿ. ಅಲ್ಯೂಮಿನಿಯಂ, ಕಬ್ಬಿಣ, ತಾಮ್ರ ಬೆಳ್ಳಿ, ಮರಳು.

> ಮರಳು


ಡಿ. ಸಕ್ಕರೆ ,ಉಪ್ಪು ,ಮರಳು ,ತಾಮ್ರದ ಸಲ್ಫೇಟ್.

> ಮರಳು.

ಗಾದೆ ಮಾತುಗಳು

 

ಗಾದೆ ಮಾತುಗಳು


೧. ಹಿತ್ತಲ ಗಿಡ ಮದ್ದಲ್ಲ.
೨. ಮಾಡಿದ್ದುಣ್ಣೋ ಮಹರಾಯ.
೩. ಕೈ ಕೆಸರಾದರೆ ಬಾಯಿ ಮೊಸರು.
೪. ಹಾಸಿಗೆ ಇದ್ದಷ್ತು ಕಾಲು ಚಾಚು.
೫. ಅ೦ಗೈ ಹುಣ್ಣಿಗೆ ಕನ್ನಡಿ ಬೇಕೆ.
೬. ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರ೦ತೆ.
೭. ಎತ್ತೆಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಎಳೆದರ೦ತೆ.
೮. ಮನೇಲಿ ಇಲಿ, ಬೀದೀಲಿ ಹುಲಿ.
೯. ಕು೦ಬಳಕಾಯಿ ಕಳ್ಳ ಅ೦ದರೆ ಹೆಗಲು ಮುಟ್ಟಿ ನೋದಿಕೊ೦ಡನ೦ತೆ.
೧೦. ಕಾರ್ಯಾವಾಸಿ ಕತ್ತೆಕಾಲು ಹಿಡಿ.
೧೧. ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು.
೧೨. ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು.
೧೩. ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ.
೧೪. ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ.
೧೫. ಅಕ್ಕಿ ಮೇಲೆ ಆಸೆ, ನೆ೦ಟರ ಮೇಲೂ ಪ್ರೀತಿ.
೧೬. ಅಜ್ಜಿಗೆ ಅರಿವೆ ಚಿ೦ತೆ, ಮಗಳಿಗೆ ಗ೦ಡನ ಚಿ೦ತೆ.
೧೭. ಅಲ್ಪನಿಗೆ ಐಶ್ವರ್ಯ ಬ೦ದರೆ ಅರ್ಧರಾತ್ರೀಲಿ ಕೊಡೆ ಹಿಡಿದನ೦ತೆ.
೧೮. ಅತ್ತೆಗೊ೦ದು ಕಾಲ ಸೊಸೆಗೊ೦ದು ಕಾಲ.
೧೯. ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ.
೨೦. ಬೇಲೀನೆ ಎದ್ದು ಹೊಲ ಮೇಯ್ದ೦ತೆ.
೨೧. ಅ೦ಬಲಿ ಕುಡಿಯುವವನಿಗೆ ಮೀಸೆ ತಿಕ್ಕುವನೊಬ್ಬ.
೨೨. ಅ೦ತು ಇ೦ತು ಕು೦ತಿ ಮಕ್ಕಳಿಗೆ ಎ೦ತೂ ರಾಜ್ಯವಿಲ್ಲ.
೨೩. ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
೨೪. ಚಿ೦ತೆ ಇಲ್ಲದವನಿಗೆ ಸ೦ತೆಯಲ್ಲೂ ನಿದ್ದೆ.
೨೫. ದೇವರು ವರ ಕೊಟ್ರು ಪೂಜಾರಿ ಕೊಡ.
೨೬. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ.
೨೭. ಎತ್ತು ಏರಿಗೆಳೆಯಿತು, ಕೋಣ ನೀರಿಗೆಳೆಯಿತು.
೨೮. ಎತ್ತು ಈಯಿತು ಅ೦ದರೆ ಕೊಟ್ಟಿಗೆಗೆ ಕಟ್ಟು ಎ೦ದರ೦ತೆ.
೨೯. ಗ೦ಡ ಹೆ೦ಡಿರ ಜಗಳ ಉ೦ಡು ಮಲಗೋ ತನಕ.
೩೦. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ.
೩೧. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
೩೨. ಗೆದ್ದೆತ್ತಿನ ಬಾಲ ಹಿಡಿದ ಹಾಗೆ.
೩೩. ಗಣೇಶನನ್ನು ಮಾಡಲು ಹೋಗಿ ಅವರಪ್ಪನನ್ನು ಮಾಡಿದನ೦ತೆ.
೩೪. ಭ೦ಗಿದೇವರಿಗೆ ಹೆ೦ಡುಗುಡುಕ ಪೂಜಾರಿ.
೩೫. ಕಾಸಿಗೆ ತಕ್ಕ ಕಜ್ಜಾಯ.
೩೬. ಸಾವಿರ ಸುಳ್ಳು ಹೇಳಿ ಒ೦ದು ಮದುವೆ ಮಾಡು.
೩೭. ಕೂಸು ಹುಟ್ಟುವ ಮು೦ಚೆ ಕುಲಾವಿ.
೩೮. ಅವರು ಚಾಪೆ ಕೆಳಗೆ ತೂರಿದರೆ ನೀನು ರ೦ಗೋಲಿ ಕೆಲಗೆ ತೂರು.
೩೯. ಇಬ್ಬರ ಜಗಳ ಮೂರನೆಯವನಿಗೆ ಲಾಭ.
೪೦. ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ.
೪೧. ತಾನು ಮಾಡುವುದು ಉತ್ತಮ, ಮಗ ಮಾಡುವುದು ಮಧ್ಯಮ, ಆಳು ಮಾಡುವುದು
ಹಾಳು.
೪೨. ಉಚ್ಚೇಲಿ ಮೀನು ಹಿಡಿಯೋ ಜಾತಿ.
೪೩. ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮ೦ದಿರು, ಬೆಳಿತಾ ಬೆಳಿತಾ ದಾಯಾದಿಗಳು.
೪೪. ಮಗೂನೂ ಚಿವುಟಿ ತೊಟ್ಟಿಲು ತೂಗಿದ ಹಾಗೆ.
೪೫. ನದೀನೆ ನೋಡದೆ ಇರುವನು ಸಮುದ್ರವರ್ಣನೆ ಮಾಡಿದ ಹಾಗೆ.
೪೬. ಅ೦ಗೈಯಲ್ಲಿ ಬೆಣ್ಣೆ ಇಟ್ಕೊ೦ಡು ಊರೆಲ್ಲಾ ತುಪ್ಪಕ್ಕೆ ಅಲೆದಾಡಿದರ೦ತೆ.
೪೭. ಶುಭ ನುಡಿಯೋ ಸೋಮ ಅ೦ದರೆ ಗೂಬೆ ಕಾಣ್ತಿದ್ಯಲ್ಲೋ ಮಾಮ ಅ೦ದ ಹಾಗೆ.
೪೮. ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
೪೯. ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
೫೦. ಕಜ್ಜಿ ಹೋದರೂ ಕಡಿತ ಹೋಗಲಿಲ್ಲ.
೫೧. ಮಾತು ಬೆಳ್ಳಿ, ಮೌನ ಬ೦ಗಾರ.
೫೨. ಎಲ್ಲಾರ ಮನೆ ದೋಸೆನೂ ತೂತೆ.
೫೩. ಒಲ್ಲದ ಗ೦ಡನಿಗೆ ಮೊಸರಲ್ಲೂ ಕಲ್ಲು.
೫೪. ಅಡುಗೆ ಮಾಡಿದವಳಿಗಿ೦ತ ಬಡಿಸಿದವಲೇ ಮೇಲು.
೫೫. ತಾಯಿಯ೦ತೆ ಮಗಳು ನೂಲಿನ೦ತೆ ಸೀರೆ.
೫೬. ಅನುಕೂಲ ಸಿ೦ಧು, ಅಭಾವ ವೈರಾಗ್ಯ.
೫೭. ಕೊಚ್ಚೆ ಮೇಲೆ ಕಲ್ಲು ಹಾಕಿದ ಹಾಗೆ.
೫೮. ತಮ್ಮ ಮನೇಲಿ ಹಗ್ಗಣ ಸತ್ತಿದ್ದರೂ ಬೇರೆ ಮನೆಯ ಸತ್ತ ನೊಣದ ಕಡೆ ಬೆಟ್ಟು ಮಾಡಿದ ಹಾಗೆ.
೫೯. ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೇ ?
೬೦. ಮನೆಗೆ ಮಾರಿ, ಊರಿಗೆ ಉಪಕಾರಿ.
೬೧. ಉಗುರಿನಲ್ಲಿ ಹೋಗೋ ಚಿಗುರಿಗೆ ಕೋಡಾಲಿ ಏಕೆ ?
೬೨. ಅಲ್ಪರ ಸ೦ಘ ಅಭಿಮಾನ ಭ೦ಗ.
೬೨. ಸಗಣಿಯವನ ಸ್ನೇಹಕ್ಕಿ೦ತ ಗ೦ಧದವನ ಜೊತೆ ಗುದ್ದಾಟ ಮೇಲು.
೬೩. ಮಾಡಿದವರ ಪಾಪ ಆಡಿದವರ ಬಾಯಲ್ಲಿ.
೬೪. ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ಯೇ ?
೬೫. ಗೋರ್ಕಲ್ಲ ಮೇಲೆ ನೀರು ಸುರಿದ೦ತೆ.
೬೬. ಆಕಾಶ ನೋಡೋದಕ್ಕೆ ನೂಕುನುಗ್ಗಲೇ ?
೬೭. ಗಾಳಿ ಬ೦ದಾಗ ತೂರಿಕೋ.
೬೮. ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ.
೬೯. ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
೭೦. ಬಿರಿಯಾ ಉ೦ಡ ಬ್ರಾಹ್ಮಣ ಭಿಕ್ಷೆ ಬೇಡಿದ.
೭೧. ದುಡ್ಡೇ ದೊಡ್ಡಪ್ಪ.
೭೨. ಬರಗಾಲದಲ್ಲಿ ಅಧಿಕ ಮಾಸ.
೭೩. ಹೊಳೆ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕೆ ?
೭೪. ಎಣ್ಣೆ ಬ೦ದಾಗ ಕಣ್ಣು ಮುಚ್ಚಿಕೊ೦ಡ ಹಾಗೆ
೭೫. ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
೭೬. ಮ೦ತ್ರಕ್ಕಿ೦ತ ಉಗುಳೇ ಜಾಸ್ತಿ.
೭೭. ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
೭೮. ಕು೦ಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
೭೯. ಕ೦ತೆಗೆ ತಕ್ಕ ಬೊ೦ತೆ.
೮೦. ಪುರಾಣ ಹೇಳೋಕ್ಕೆ, ಬದನೇಕಾಯಿ ತಿನ್ನೋಕ್ಕೆ.
೮೧. ಅ೦ಕೆ ಇಲ್ಲದ ಕಪಿ ಲ೦ಕೆ ಸುಟ್ಟಿತು.
೮೨. ಓದಿ ಓದಿ ಮರುಳಾದ ಕೂಚ೦ಭಟ್ಟ.
೮೩. ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಸುಖವಿಲ್ಲ.
೮೪. ಕೋಟಿ ವಿದ್ಯೆಗಿ೦ತ ಮೇಟಿ ವಿದ್ಯೆಯೇ ಮೇಲು.
೮೬. ಬೆಟ್ಟ ಅಗೆದು ಇಲಿ ಹಿಡಿದ ಹಾಗೆ.
೮೭. ಓದುವಾಗ ಓದು, ಆಡುವಾಗ ಆಡು.
೮೮. ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ.
೮೯. ಸ೦ಸಾರ ಗುಟ್ಟು, ವ್ಯಾಧಿ ರಟ್ಟು.
೯೦. ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರ೦ತೆ.
೯೧. ಕೊಟ್ಟವನು ಕೋಡ೦ಗಿ, ಇಸ್ಕೊ೦ಡೋನು ಈರಭದ್ರ.
೯೨. ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ.
೯೩. ಮುಖ ನೋಡಿ ಮಣೆ ಹಾಕು.
೯೪. ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರ೦ತೆ.
೯೫. ಮ೦ತ್ರಕ್ಕೆ ಮಾವಿನಕಾಯಿ ಉದುರತ್ಯೇ ?
೯೬. ತು೦ಬಿದ ಕೊಡ ತುಳುಕುವುದಿಲ್ಲ.
೯೭. ಉಪ್ಪಿಗಿ೦ತ ರುಚಿಯಿಲ್ಲ ತಾಯಿಗಿ೦ತ ದೇವರಿಲ್ಲ.
೯೮. ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ?
೯೯. ಇರಲಾರದೆ ಇರುವೆ ಬಿಟ್ಟುಕೊ೦ಡ ಹಾಗೆ.
೧೦೦. ಎ೦ಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ.
೧೦೧. ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊ೦ಡರು.
೧೦೨. ದುಡಿಮೆಯೇ ದುಡ್ಡಿನ ತಾಯಿ.
೧೦೩. ಇಲಿ ಬ೦ತು ಅ೦ದರೆ ಹುಲಿ ಬ೦ತು ಎ೦ದರು.
೧೦೪. ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣಸ೦ಕಟ.
೧೦೫. ಊರಿಗೆ ಬ೦ದವಳು ನೀರಿಗೆ ಬರದೆ ಇರುತ್ತಾಳೆಯೇ ?
೧೦೬. ಇರುಳು ಕ೦ಡ ಭಾವೀಲಿ ಹಗಲು ಬಿದ್ದರ೦ತೆ.
೧೦೭. ಕೋತಿ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ.
೧೦೮. ಶಿವಪೂಜೇಲಿ ಕರಡಿ ಬಿಟ್ಟ ಹಾಗೆ.
೧೦೯. ರೋಗಿ ಬಯಸಿದ್ದು ಹಾಲು-ಅನ್ನ, ವೈದ್ಯ ಕೊಟ್ಟಿದ್ದು ಹಾಲು-ಅನ್ನ.
೧೧೦. ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು.
೧೧೧. ಹೊರಗೆ ಥಳಕು ಒಳಗೆ ಹುಳಕು.
೧೧೨. ಸ೦ಕಟ ಬ೦ದಾಗ ವೆ೦ಕಟರಮಣ.
೧೧೩. ಯಥಾ ರಾಜ ತಥಾ ಪ್ರಜಾ.
೧೧೪. ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು.
೧೧೫. ಬೆರಳು ತೋರಿಸಿದರೆ ಹಸ್ತ ನು೦ಗಿದನ೦ತೆ.
೧೧೬. ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರ೦ತೆ.
೧೧೭. ಈಚಲ ಮರದ ಕೆಳಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ.
೧೧೮. ಉಪ್ಪು ತಿ೦ದ ಮನೆಗೆ ಎರಡು ಬಗೆಯ ಬೇಡ.
೧೧೯. ಬಡವನ ಕೋಪ ದವಡೆಗೆ ಮೂಲ.
೧೨೦. ಒಪ್ಪೊತ್ತು೦ಡವ ಯೋಗಿ, ಎರಡೂತ್ತು೦ಡವ ಭೋಗಿ,
ಮೂರೊತ್ತು೦ಡವ ರೋಗಿ, ನಾಲ್ಕೊತ್ತು೦ಡವನ ಹೊತ್ಕೊ೦ಡ್ಹೋಗಿ.
೧೨೧. ಬಲ್ಲವನೇ ಬಲ್ಲ ಬೆಲ್ಲದ ರುಚಿಯ.
೧೨೨. ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ.
೧೨೩. ಶರಣರ ಬದುಕು ಅವರ ಮರಣದಲ್ಲಿ ನೋಡು.
೧೨೪. ಎತ್ತಿಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಹಾಕಿದ ಹಾಗೆ.
೧೨೫. ಕಳ್ಳನ ಮನಸ್ಸು ಹುಳಿ-ಹುಳಿಗೆ.
೧೨೬. ಕೋತಿಗೆ ಹೆ೦ಡ ಕುಡಿಸಿದ ಹಾಗೆ.
೧೨೭. ಹಾವೂ ಸಾಯಬೇಕು, ಕೋಲೂ ಮುರಿಯಬಾರದು.
೧೨೮. ಹಾಲಿನಲ್ಲಿ ಹುಳಿ ಹಿ೦ಡಿದ೦ತೆ.
೧೨೯. ಮಳ್ಳಿ ಮಳ್ಳಿ ಮ೦ಚಕ್ಕೆ ಎಷ್ತು ಕಾಲು ಎ೦ದರೆ, ಮೂರು ಮತ್ತೊ೦ದು ಅ೦ದಳ೦ತೆ.
೧೩೦. ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು.
೧೩೧. ರಾತ್ರಿಯೆಲ್ಲಾ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮನಿಗೂ ಸೀತೆಗೂ ಏನು
ಸ೦ಬ೦ಧ ಅ೦ದ ಹಾಗೆ.
೧೩೨. ನಾರಿ ಮುನಿದರೆ ಮಾರಿ.
೧೩೩. ಕೆಟ್ಟ ಮೇಲೆ ಬುದ್ಧಿ ಬ೦ತು,ಅತ್ತ ಮೇಲೆ ಒಲೆ ಉರಿಯಿತು.
೧೩೪. ಉಪ್ಪು ತಿ೦ದಮೇಲೆ ನೀರ ಕುಡಿಯಲೇಬೇಕು.
೧೩೫. ಬೆ೦ಕಿಯಿಲ್ಲದೆ ಹೊಗೆಯಾಡುವುದಿಲ್ಲ.
೧೩೬. ಪಾಪಿ ಸಮುದ್ರ ಹೊಕ್ಕಿದರೂ ಮೊಳಕಾಲುದ್ದ ನೀರು.
೧೩೭. ಹರೆಯದಲ್ಲಿ ಹ೦ದಿ ಕೂಡ ಚೆನ್ನಾಗಿರುತ್ತೆ.
೧೩೮. ಗ೦ಡ ಹೆ೦ಡಿರ ಜಗಳದಲ್ಲಿ ಕೂಸು ಬಡವಾಯ್ತು.
೧೩೯. ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
೧೪೦. ಪ್ರತ್ಯಕ್ಷವಾಗಿ ಕ೦ಡರೂ ಪ್ರಮಾಣಿಸಿ ನೋಡು.
೧೪೧. ಬೆಳ್ಳಗಿರುವುದೆಲ್ಲಾ ಹಾಲಲ್ಲ.
೧೪೨. ಹೊಸ ವೈದ್ಯನಿಗಿ೦ತ ಹಳೇ ರೋಗೀನೇ ಮೇಲು.
೧೪೩. ಬಡವರ ಮನೆ ಊಟ ಚೆನ್ನ, ಶೀಮ೦ತರ ಮನೆ ನೋಟ ಚೆನ್ನ.
೧೪೪. ತೋಟ ಶೃ೦ಗಾರ, ಒಳಗೆ ಗೋಣಿ ಸೊಪ್ಪು.
೧೪೫. ಬಾಯಿ ಬಿಟ್ಟರೆ ಬಣ್ಣಗೇಡು.
೧೪೬. ಸ೦ಕಟ ಬ೦ದಾಗ ವೆ೦ಕಟರಮಣ.
೧೪೭. ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬ೦ದು ಎದೆಗೆ ಒದ್ದನ೦ತೆ.
೧೪೮. ಒಕ್ಕಣ್ಣನ ರಾಜ್ಯದಲ್ಲಿ ಒ೦ದು ಕಣ್ಣು ಮುಚ್ಚಿಕೊ೦ಡು ನಡಿ.
೧೪೯. ಸೀರೆ ಗ೦ಟು ಬಿಚ್ಚೋವಾಗ ದಾರದ ನ೦ಟು ಯಾರಿಗೆ ಬೇಕು.
೧೫೦. ಮನೆ ತು೦ಬಾ ಮುತ್ತಿದ್ದರೆ ತಿಕಕ್ಕೂ ಪೋಣಿಸಿಕೊ೦ಡರ೦ತೆ.
೧೫೧. ಕುಡಿಯೋ ನೀರಿನಲ್ಲಿ ಕೈಯಾಡಿಸಿದ ಹಾಗೆ.
೧೫೨. ಅಟ್ಟದ ಮೇಲಿ೦ದ ಬಿದ್ದವನಿಗೆ ದಡಿಗೆ ತೊಗೊಡು ಹೇರಿದರ೦ತೆ.
೧೫೩. ಮೀಸೆ ಬ೦ದವನು ದೇಶ ಕಾಣ.
೧೫೪. ಊರು ಸುಟ್ಟರೂ ಹನುಮ೦ತರಾಯ ಹೊರಗೆ.
೧೫೫. ಆಕಳು ಕಪ್ಪಾದರೆ ಹಾಲು ಕಪ್ಪೆ.
೧೫೬. ಕಬ್ಬು ಡೊ೦ಕಾದರೆ ಸಿಹಿ ಡೊ೦ಕೆ.
೧೫೭. ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೋಲ್ಲ.
೧೫೮. ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊ೦ಡ೦ತೆ.
೧೫೯. ಕೋಣನ ಮು೦ದೆ ಕಿನ್ನರಿ ಬಾರಿಸಿದ ಹಾಗೆ.
೧೬೦. ನರಿ ಕೂಗು ಗಿರಿ ಮುಟ್ಟುತ್ಯೇ ?
೧೬೧. ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ.
೧೬೨. ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದ೦ತೆ.
೧೬೩. ಹೌಡಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು.
೧೬೪. ರ೦ಗನ ಮು೦ದೆ ಸಿ೦ಗನೇ ? ಸಿ೦ಗನ ಮು೦ದೆ ಮ೦ಗನೇ ?
೧೬೫. ಕಾಸಿದ್ದರೆ ಕೈಲಾಸ.
೧೬೬. ಕ೦ಕುಳಲ್ಲಿ ದೊಣ್ಣೆ, ಕೈಯಲ್ಲಿ ಶರಣಾರ್ತಿ.
೧೬೭. ಕೊನೆಯ ಕೂಸು ಕೊಳೆಯಿತು, ಒನೆಯ ಕೂಸು ಬೆಳೆಯಿತು.
೧೬೮. ಕೆಲಸವಿಲ್ಲದ ಕು೦ಬಾರ ಮಗನ ಮುಕಳಿ ಕೆತ್ತಿದನ೦ತೆ.
೧೬೯. ಆರಕ್ಕೆ ಹೆಚ್ಚಿಲ್ಲ, ಮೂರಕ್ಕೆ ಕಮ್ಮಿಯಿಲ್ಲ.
೧೭೦. ಕಳ್ಳನ ಹೆ೦ಡತಿ ಎ೦ದಿದ್ದರೂ ಮು೦ಡೆ.
೧೭೧. ಅಯ್ಯಾ ಎ೦ದರೆ ಸ್ವರ್ಗ, ಎಲವೋ ಎ೦ದರೆ ನರಕ.
೧೭೨. ಹೂವಿನ ಜೊತೆ ದಾರ ಮುಡಿಯೇರಿತು.
೧೭೩. ಮಳೆ ಹುಯ್ದರೆ ಕೇಡಲ್ಲ, ಮಗ ಉ೦ಡರೆ ಕೇಡಲ್ಲ.
೧೭೪. ಐದು ಬೆರಳು ಒ೦ದೇ ಸಮ ಇದುವುದಿಲ್ಲ.
೧೭೫. ಕೋಪದಲ್ಲಿ ಕೊಯ್ದ ಮೂಗು ಶಾ೦ತವಾದ ಮೇಲೆ ಬರುವುದಿಲ್ಲ.
೧೭೬. ಕುರಿ ಕೊಬ್ಬಿದಷ್ಟು ಕುರುಬನಿಗೇ ಲಾಭ.
೧೭೭. ದೀಪದ ಕೆಳಗೆ ಯಾವತ್ತೂ ಕತ್ತಲೆ.
೧೭೮. ತಮ್ಮ ಕೋಳಿ ಕೂಗಿದ್ದರಿ೦ದಲೇ ಬೆಳಗಾಯ್ತು ಎ೦ದುಕೊ೦ಡರು.
೧೭೯. ಅತ್ತ ದರಿ, ಇತ್ತ ಪುಲಿ.
೧೮೦. ಬಿಸಿ ತುಪ್ಪ, ನು೦ಗೋಕ್ಕೂ ಆಗೋಲ್ಲ, ಉಗುಳೋಕ್ಕೂ ಆಗೋಲ್ಲ.
೧೮೧. ಆಪತ್ತಿಗಾದವನೇ ನೆ೦ಟ.
೧೮೨. ಶ೦ಖದಿ೦ದ ಬ೦ದರೇನೇ ತೀರ್ಥ.
೧೮೩. ಹನಿಹನಿಗೂಡಿದರೆ ಹಳ್ಳ, ತೆನೆತೆನೆಗೂಡಿದರೆ ಬಳ್ಳ.
೧೮೪. ಎಲ್ಲಾ ಜಾಣ, ತುಸು ಕೋಣ.
೧೮೫. ಇಟ್ಟುಕೊ೦ಡವಳು ಇರೋ ತನಕ, ಕಟ್ಟಿಕೊ೦ಡವಳು ಕೊನೇ ತನಕ.
೧೮೬. ಮೂಗಿಗಿ೦ತ ಮೂಗುತ್ತಿ ಭಾರ.
೧೮೭. ನವಿಲನ್ನು ನೋಡಿ ಕೆ೦ಭೂತ ಪುಕ್ಕ ಕೆದರಿತ೦ತೆ.
೧೮೮. ಬೀದೀಲಿ ಹೋಗ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊ೦ಡ೦ತೆ.
೧೮೯. ಕಣ್ಣರಿಯದಿದ್ದರೂ ಕರುಳರಿಯುತ್ತದೆ.
೧೯೦. ತನಗೇ ಜಾಗವಿಲ್ಲ. ಕೊರಳಲ್ಲಿ ಡೋಲು ಬೇರೆ.
೧೯೧. ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು.
೧೯೨. ಇರೋ ಮೂವರಲ್ಲಿ ಕದ್ದೋರು ಯಾರು ?
೧೯೩. ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ.
೧೯೪. ತೋಳ ಬಿದ್ದರೆ ಆಳಿಗೊ೦ದು ಕಲ್ಲು.
೧೯೫. ಕೆಟ್ಟ ಕಾಲ ಬ೦ದಾಗ ಕಟ್ಟಿಕೊ೦ಡವಳೂ ಕೆಟ್ಟವಳು.
೧೯೬. ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ.
೧೯೭. ಮುಸುಕಿನೊಳಗೆ ಗುದ್ದಿಸಿಕೊ೦ಡ೦ತೆ.
೧೯೮. ತನ್ನ ಓಣಿಯಲ್ಲಿ ನಾಯಿಯೂ ಸಿ೦ಹ.
೧೯೯. ಹೆದರುವವರ ಮೇಲೆ ಕಪ್ಪೆ ಎಸೆದರ೦ತೆ.
೨೦೦. ಹೊಳೆ ದಾಟಿದ ಮೇಲೆ ಅ೦ಬಿಗ ಮಿ೦ಡ.
೨೦೧. ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೇ ?
೨೦೨. ಅಕ್ಕಸಾಲಿ, ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ.
೨೦೩. ಯುದ್ಧ ಕಾಲೇ ಶಸ್ತ್ರಾಭ್ಯಾಸ.
೨೦೪. ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು.
೨೦೫. ನಾಯಿ ಬಾಲ ಎ೦ದಿಗೂ ಡೊ೦ಕು.
೨೦೬. ಮಹಾಜನಗಳು ಹೋದದ್ದೇ ದಾರಿ.
೨೦೭. ಅರವತ್ತಕ್ಕೆ ಅರಳು ಮರಳು.
೨೦೮. ಜನ ಮರುಳೋ ಜಾತ್ರೆ ಮರುಳೋ.
೨೦೯. ಕು೦ಟನಿಗೆ ಎ೦ಟು ಚೇಶ್ಟೆ.
೨೧೦. ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ.
೨೧೧. ಬೊಗಳುವ ನಾಯಿ ಕಚ್ಚುವುದಿಲ್ಲ.
೨೧೨. ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ.
೨೧೩. ಕೈಗೆಟುಕದ ದ್ರಾಕ್ಷಿ ಹುಳಿ.
೨೧೪. ಕೊ೦ಕಣ ಸುತ್ತಿ ಮೈಲಾರಕ್ಕೆ ಬ೦ದರು.
೨೧೫. ದುಷ್ಟರ ಕ೦ಡರೆ ದೂರ ಇರು.
೨೧೬. ಒ೦ದು ಕಣ್ಣಿಗೆ ಬೆಣ್ಣೆ, ಇನ್ನೊ೦ದು ಕಣ್ಣಿಗೆ ಸುಣ್ಣ.
೨೧೭. ನಿಸ್ಸಹಾಯಕರಮೇಲೆ ಹುಲ್ಲು ಕಡ್ಡಿ ಸಹ ಬುಸುಗುಟ್ಟುತ್ತೆ.
೨೧೮. ಕ೦ಡವರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ.
೨೧೯. ಹ೦ಗಿನರಮನೆಗಿ೦ತ ಗುಡಿಸಲೇ ಮೇಲು.
೨೨೦. ಚೆಲ್ಲಿದ ಹಾಲಿಗೆ, ಒಡೆದ ಕನ್ನಡಿಗೆ ಎ೦ದೂ ಅಳಬೇಡ.
೨೨೧. ಕದ್ದು ತಿ೦ದ ಹಣ್ಣು, ಪಕ್ಕದ ಮನೆ ಊಟ, ಎ೦ದೂ ಹೆಚ್ಚು ರುಚಿ.
೨೨೨. ಕುದಿಯುವ ಎಣ್ಣೆಯಿ೦ದ ಕಾದ ತವಾದ ಮೇಲೆ ಬಿದ್ದ ಹಾಗೆ.
೨೨೩. ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.
೨೨೪. ಹಳೆ ಚಪ್ಪಲಿ, ಹೊಸ ಹೆ೦ಡತಿ ಕಚ್ಚೂಲ್ಲ.
೨೨೫. ರವಿ ಕಾಣದ್ದನ್ನು ಕವಿ ಕ೦ಡ.
೨೨೬. ಕೆಟ್ಟು ಪಟ್ಟಣ ಸೇರು.
೨೨೭. ಕಾಲಿನದು ಕಾಲಿಗೆ, ತಲೆಯದು ತಲೆಗೆ.
೨೨೮. ಹಲ್ಲಿದ್ದವನಿಗೆ ಕಡಲೆ ಇಲ್ಲ, ಕದಲೆಯಿದ್ದವನಿಗೆ ಹಲ್ಲಿಲ್ಲ.
೨೨೯. ಕನ್ನಡಿ ಒಳಗಿನ ಗ೦ಟು ಕೈಗೆ ದಕ್ಕೀತೆ ?
೨೩೦. ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲದು.
೨೩೧. ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೆ ಮೇಲೆ ಬಿತ್ತು.
೨೩೨. ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತೆ.
೨೩೩. ನಾಯಿಗೆ ಹೇಳಿದರೆ, ನಾಯಿ ತನ್ನ ಬಾಲಕ್ಕೆ ಹೇಳಿತ೦ತೆ.
೨೩೪. ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ.
೨೩೫. ಹುಟ್ಟಿಸಿದ ದೇವರು ಹುಲ್ಲು ಮೇಯಿಸದೇ ಇರುವನೇ ?
೨೩೬. ಕೊಟ್ಟದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ.
೨೩೭. ಮದುವೆಯಾಗೋ ಗು೦ಡ ಅ೦ದರೆ ನೀನೆ ನನ್ನ ಹೆ೦ಡತಿಯಾಗು ಅ೦ದ ಹಾಗೆ.
೨೩೮. ಕೈಗೆ ಬ೦ದ ತುತ್ತು ಬಾಯಿಗೆ ಬರಲಿಲ್ಲ.
೨೩೯. ತಾನೂ ತಿನ್ನ, ಪರರಿಗೂ ಕೊಡ.
೨೪೦. ಗ೦ಡಸಿಗೇಕೆ ಗೌರಿ ದುಃಖ ?
೨೪೧. ನಗುವ ಹೆ೦ಗಸು, ಅಳುವ ಗ೦ಡಸು ಇಬ್ಬರನ್ನೂ ನ೦ಬಬಾರದು.
೨೪೨. ಲೇ ! ಅನ್ನೋಕ್ಕೆ ಅವಳೇ ಇಲ್ಲ, ಮಗಳ ಹೆಸರು ಅನ೦ತಯ್ಯ.
೨೪೩. ನೂರು ಜನಿವಾರ ಒಟ್ಟಿಗಿರಬಹುದು, ನೂರು ಜಡೆ ಒಟ್ಟಿಗಿರುವುದಿಲ್ಲ.
೨೪೪. ಗಾಯದ ಮೇಲೆ ಬರೆ ಎಳೆದ ಹಾಗೆ.
೨೪೫. ಗುಡ್ಡ ಕಡಿದು, ಹಳ್ಳ ತು೦ಬಿಸಿ, ನೆಲ ಸಮ ಮಾಡಿದ ಹಾಗೆ.
೨೪೬. ಅತಿ ಆಸೆ ಗತಿ ಕೇಡು.
೨೪೭. ವಿನಾಶ ಕಾಲೇ ವಿಪರೀತ ಬುದ್ಧಿ.
೨೪೮. ಅತಿಯಾದರೆ ಆಮೃತವೂ ವಿಷವೇ.
೨೪೯. ಬಡವ, ನೀ ಮಡಗ್ದ್ಹಾ೦ಗ್ ಇರು.
೨೫೦. ಆತುರಗಾರನಿಗೆ ಬುದ್ಧಿ ಮಟ್ಟ.
೨೫೧. ರತ್ನ ತಗೊ೦ಡು ಹೋಗಿ ಗಾಜಿನ ತು೦ಡಿಗೆ ಹೋಲಿಸಿದ ಹಾಗೆ.
೨೫೨. ಗಾಜಿನ ಮನೇಲಿರುವರು ಅಕ್ಕ ಪಕ್ಕದ ಮನೆ ಮೇಲೆ ಕಲ್ಲೆಸೆಯಬಾರದು.
೨೫೩. ಹುಚ್ಚುಮು೦ಡೆ ಮದುವೇಲಿ ಉ೦ಡವನೇ ಜಾಣ.
೨೫೪. ಉ೦ಡೂ ಹೋದ, ಕೊ೦ಡೂ ಹೋದ.
೨೫೫. ಎಲೆ ಎತ್ತೋ ಜಾಣ ಅ೦ದರೆ ಉ೦ಡೋರೆಶ್ಟು ಅ೦ದನ೦ತೆ.
೨೫೬. ಕೋತಿ ತಾನು ಮೊಸರನ್ನ ತಿ೦ದು ಮೇಕೆ ಬಾಯಿಗೆ ಒರಸಿದ ಹಾಗೆ.
೨೫೭. ಹಾಡಿದ್ದೇ ಹಾಡೋ ಕಿಸುಬಾಯಿ ದಾಸ.
೨೫೮. ಹಸಿ ಗೋಡೆ ಮೇಲೆ ಹರಳು ಎಸೆದ೦ತೆ.
೨೫೯. ಊರು ಹೋಗು ಅನ್ನುತ್ತೆ, ಕಾಡು ಬಾ ಅನ್ನುತ್ತೆ.
೨೬೦. ಕಾಮಾಲೆ ಕಣ್ಣವನಿಗೆ ಕಾಣುವುದೆಲ್ಲಾ ಹಳದಿ.
೨೬೧. ಲ೦ಘನ೦ ಪರಮೌಶಧ೦.
೨೬೨. ಹಾಲು ಕುಡಿದ ಮಕ್ಕಳೇ ಬದುಕೋಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೆಯೇ

ಪರಿಸರ ಅಧ್ಯಯನ. ವಸತಿ ವೈವಿಧ್ಯತೆ ವಿಡಿಯೋ

ವಸತಿ ವೈವಿಧ್ಯತೆ

ದಶಕ ಸಹಿತ ವ್ಯವಕಲನ ವಿಡಿಯೋ

ದಶಕ ಸಹಿತ ವ್ಯವಕಲನ

ಬೆಳಕಿನ ಪ್ರತಿಫಲನದ ನಿಯಮಗಳು, ಬೆಳಕಿನ ವರ್ಣ ವಿಭಜನೆ ವಿಡಿಯೋ

ಬೆಳಕಿನ ಪ್ರತಿಫಲನದ ನಿಯಮಗಳು ಮತ್ತು ವರ್ಣ ವಿಭಜನೆ

6th ವಿಜ್ಞಾನ, ಚಲನೆಯ ವಿಧಗಳು. ವಿಡಿಯೋಗಳು

6th science videos

6th ವಿಜ್ಞಾನ . 3 ಎಳೆಯಿಂದ ಬಟ್ಟೆ. ಪ್ರಶ್ನೋತ್ತರ

 6th - ವಿಜ್ಞಾನ - ಅಧ್ಯಾಯ ೩ - ಎಳೆಯಿಂದ ಬಟ್ಟೆ - ಪ್ರಶ್ನೋತ್ತರಗಳು


ಅಧ್ಯಾಯ 3 ಎಳೆಯಿಂದ ಬಟ್ಟೆ 

   ~~~ :   ಅಭ್ಯಾಸಗಳು :~~~~~ 

1. ಕೆಳಗಿನ ನಾರುಗಳನ್ನು ನೈಸರ್ಗಿಕ ಅಥವಾ ಸಂಶ್ಲೇಷಿತ ಎಂಬುದಾಗಿ ವರ್ಗೀಕರಿಸಿ .

( ನೈಲಾನ್, ಉಣ್ಣೆ, ಹತ್ತಿ ,ರೇಷ್ಮೆ ಪಾಲಿಯೆಸ್ಟರ್, ಸೆಣಬು )

ಉತ್ತರ :- 

ನೈಸರ್ಗಿಕ ನಾರು - ಉಣ್ಣೆ, ಹತ್ತಿ, ರೇಷ್ಮೆ, ಸೆಣಬು

ಸಂಶ್ಲೇಷಿತ ನಾರು - ನೈಲಾನ್ , ಪಾಲಿಯೆಸ್ಟರ್‌


2 . ಕೆಳಗಿನ ಹೇಳಿಕೆಗಳು ಸರಿ ಅಥವಾ ತಪ್ಪು ಎಂಬುದನ್ನು ತಿಳಿಸಿ 

ಎ) ನೂಲನ್ನು ನಾರಿನಿಂದ ತಯಾರಿಸಲಾಗುತ್ತದೆ 

=> ಸರಿ

ಬಿ ) ನೂಲುವುದು ನಾರುಗಳನ್ನು ಮಾಡುವ ಕ್ರಿಯೆ 

=> ತಪ್ಪು

ಸಿ ) ಸೆಣಬು ತೆಂಗಿನಕಾಯಿಯ ಹೊರಕವಚ 

=> ತಪ್ಪು

ಡಿ ) ಹತ್ತಿಯಿಂದ ಬೀಜ ಬೇರ್ಪಡಿಸುವ ಕ್ರಿಯೆಯನ್ನು ಹಿಂಜುವುದು ಎನ್ನುವರು 

=> ಸರಿ

ಇ ) ನೂಲನ್ನು ಮೇಯುವುದರಿಂದ ಬಟ್ಟೆ ತಯಾರಾಗುತ್ತದೆ 

=> ಸರಿ

ಎಫ್ ) ಗಿಡದ ಕಾಂಡದಿಂದ ರೇಷ್ಮೆ ನಾರನ್ನು ಪಡೆಯಲಾಗುತ್ತದೆ 

=> ತಪ್ಪು

ಜಿ) ಪಾಲಿಯೆಸ್ಟರ್ ಒಂದು ನೈಸರ್ಗಿಕ ನಾರು 

= ತಪ್ಪು


3 . ಬಿಟ್ಟ ಸ್ಥಳಗಳನ್ನು ತುಂಬಿ 

ಎ) ಸಸ್ಯದ ನಾರುಗಳನ್ನು ____ ಮತ್ತು _______ ಗಳಿಂದ ಪಡೆಯಲಾಗುತ್ತದೆ.

=> ಸೆಣಬು , ಹತ್ತಿ

ಬಿ) ಪ್ರಾಣಿಯ ನಾರುಗಳು_____ ಮತ್ತು _____

=> ರೇಷ್ಮೆ ಮತ್ತು ಉಣ್ಣೆ

4 ) ಸಸ್ಯದ ಯಾವ ಭಾಗಗಳಿಂದ ಹತ್ತಿ ಮತ್ತು ಸೆಣಬು ಗಳನ್ನು ಪಡೆಯಲಾಗುತ್ತದೆ ?

ಉತ್ತರ :- ಸೆಣಬು - ಕಾಂಡ

             ಹತ್ತಿ - ಹಣ್ಣು

5 ) ತೆಂಗಿನ ನಾರಿನಿಂದ ತಯಾರಾಗುವ ಎರಡು ವಸ್ತುಗಳನ್ನು ಹೆಸರಿಸಿ .

ಉತ್ತರ - ಚಾಪೆ  , ಗೊಂಬೆ

ನಾರಿನಿಂದ ನೂಲನ್ನು ತಯಾರಿಸುವ ಕ್ರಿಯೆಯನ್ನು ವಿವರಿಸಿ 


ಹೆಚ್ಚುವರಿ ಪ್ರಶ್ನೆಗಳು 


೧) ನೇಯುವುದು ಎಂದರೇನು ?

ಉತ್ತರ :- ಎರಡು ಗುಂಪುಗಳನ್ನು ಗಳನ್ನು ಒಟ್ಟಿಗೆ ಜೋಡಿಸಿ ಬಟ್ಟೆ ತಯಾರಿಸುವ ಕ್ರಿಯೆಯನ್ನು ನೇಯುವುದು ಎನ್ನುವರು 


೨) ಹಿಂಜುವುದು ಎಂದರೇನು ?

ಉತ್ತರ :- ಸಾಮಾನ್ಯವಾಗಿ ಒಡೆದ ಹತ್ತಿ ಕಾಯಿಗಳಿಂದ ಹತ್ತಿಯನ್ನು ಕೈಯಿಂದ ತೆಗೆಯುತ್ತಾರೆ. ಬೀಜಗಳಿಂದ ನಾರನ್ನು ಬಾಚಿ ಪ್ರತ್ಯೇಕಿಸುತ್ತದೆ ಈ ಕ್ರಿಯೆಗೆ ಹಿಂಜುವುದು ಎನ್ನುವರು 


೩) ನೈಸರ್ಗಿಕ ನಾರುಗಳು ಎಂದರೇನು ?

ಉತ್ತರ :- ಕೆಲವು ಬಟ್ಟೆಗಳ ಆದ ಹತ್ತಿ ಸೆಣಬು ರೇಷ್ಮೆ ಮತ್ತು ಉಣ್ಣೆಗಳ ನಾರುಗಳನ್ನು ಸಸ್ಯ ಮತ್ತು ಪ್ರಾಣಿಗಳಿಂದ ಪಡೆಯುತ್ತೇವೆ ಇವುಗಳನ್ನು ನೈಸರ್ಗಿಕ ನಾರುಗಳು ಎಂದು ಕರೆಯುವರು 


೪) ಸಂಶ್ಲೇಷಿತ ನಾರುಗಳು ಎಂದರೇನು ?

ಉತ್ತರ :- ಸಸ್ಯ ಮತ್ತು ಪ್ರಾಣಿ ಮೂಲಗಳಿಂದ ಕೃತಕವಾಗಿ ರಾಸಾಯನಿಕ ವಸ್ತುಗಳನ್ನು ತಯಾರಿಸಲಾಗುತ್ತದೆ ಇವುಗಳನ್ನು ಸಂಸ್ಥೆಗಳು ಎನ್ನುವರು 

ಉದಾಹರಣೆಗೆ ಮತ್ತು ಆಕ್ರಿಲಿಕ್ 


೫ ) ನೂಲುವುದು  ಎಂದರೇನು ?

ಉತ್ತರ :- ನಾರುಗಳಿಂದ ನೂಲನ್ನು  ತಯಾರಿಸುವ ಕ್ರಿಯೆಯನ್ನು ನೂಲುವುದು ಎನ್ನುವರು 


೬) ನೂಲಿನಿಂದ ಬಟ್ಟೆ ಯನ್ನು ತಯಾರಿಸುವ ಪ್ರಮುಖ ವಿಧಾನಗಳು ಯಾವುವು ?

ಉತ್ತರ :- ನೇಯುವುದು ಮತ್ತು ಹೆಣೆಯುವುದು

6th ವಿಜ್ಞಾನ .2. ಆಹಾರದ ಘಟಕಗಳು. ಪ್ರಶ್ನೋತ್ತರ

ಆಹಾರದ ಘಟಕಗಳು

 2 ಆಹಾರದ ಘಟಕಗಳು 

~~~ : ಅಭ್ಯಾಸಗಳು : ~~~~~


೧. ಒಂದು ನಮ್ಮ ಆಹಾರದಲ್ಲಿರುವ ಪ್ರಮುಖ ಪೋಷಕಾಂಶಗಳನ್ನು ಹೆಸರಿಸಿ 

ಉತ್ತರ :-  ನಮ್ಮ ಆಹಾರದಲ್ಲಿರುವ ಪೋಷಕಾಂಶಗಳು ಎಂದರೆ ಕಾರ್ಬೋಹೈಡ್ರೇಟ್ಗಳು , ಪ್ರೋಟೀನ್ಗಳು ಇವುಗಳ ಜತೆಗೆ ನೀರು ಮತ್ತು ನಾರು ಪದಾರ್ಥಗಳನ್ನು ಆಹಾರ ಒಳಗೊಂಡಿರುತ್ತದೆ.


೨ .  ಕೆಳಗಿನವುಗಳನ್ನು ಹೆಸರಿಸಿ.

ಎ ) ನಮ್ಮ ದೇಹಕ್ಕೆ ಮುಖ್ಯವಾಗಿ ಶಕ್ತಿಯನ್ನು ಕೊಡುವ ಪೋಷಕಗಳು 

  ಉತ್ತರ :- ಕಾರ್ಬೋಹೈಡ್ರೇಟ್ ಗಳು ಮತ್ತು ಕೊಬ್ಬು


ಬಿ ) ನಮ್ಮ ದೇಹದ ಬೆಳವಣಿಗೆ ಮತ್ತು ನಿರ್ವಹಣೆಗೆ ಅವಶ್ಯವಿರುವ ಪೋಷಕಗಳು 

  ಉತ್ತರ :- ಪ್ರೋಟೀನ್ ಗಳು ಮತ್ತು ಖನಿಜಗಳು


ಸಿ ) ಉತ್ತಮ ದೃಷ್ಟಿಯನ್ನು ಕಾಪಾಡಿಕೊಳ್ಳಲು ಅಗತ್ಯವಾದ ವಿಟಮಿನ್ 

  ಉತ್ತರ :- ವಿಟಮಿನ್‌ ಎ


ಡಿ ) ನಮ್ಮ ಮೂಳೆಗಳನ್ನು ಆರೋಗ್ಯವಾಗಿಡಲು ಅಗತ್ಯವಿರುವ ಖನಿಜ 

ಉತ್ತರ :- ಕ್ಯಾಲ್ಸಿಯಂ


 . ಕೆಳಗಿನ ಆಹಾರ ಗಣಕಗಳು ಸಮೃದ್ಧಿಯಾಗಿರುವ ಎರಡೆರಡು ಆಹಾರ ಪದಾರ್ಥಗಳನ್ನು ಹೆಸರಿಸಿ. 

ಎ ) ಕೊಬ್ಬು 

      ಉತ್ತರ :- ಮಾಂಸ , ಮೊಟ್ಟೆ , ಶೇಂಗಾ , ಗೋಡಂಬಿ

ಬಿ ) ಪಿಸ್ಟ

ಉತ್ತರ :- ಗೋಧಿ , ಜೋಳ , ಮಾವು , ಕಬ್ಬು

ಸಿ ) ಆಹಾರದ ನಾರು ಪದಾರ್ಥ 

ಉತ್ತರ :- ತಾಜಾ ಹಣ್ಣುಗಳು , ತರಕಾರಿಗಳು

ಡಿ ) ಪ್ರೊಟೀನ್ 

        ಉತ್ತರ :- ಕಾಳುಗಳು ( ಹೆಸರು, ತೊಗರಿ, ಕಡ್ಲಿ, ಬಟಾಣೆ, ಸೋಯಾಬೀನ್ಸ್ ) , ಮಾಂಸ , ಮೊಟ್ಟೆ , ಮೀನು


೪ . ಸರಿಯಾದ ಹೇಳಿಕೆಗಳಿಗೆ (√ ) ಸರಿ ಗುರುತು ಮಾಡಿ 

ಎ) ಅನ್ನವನ್ನು ಮಾತ್ರ ಸೇವಿಸುವುದರ ಮೂಲಕ ನಾವು ನಮ್ಮ ದೇಹದ ಪೋಷಕಗಳ ಅಗತ್ಯತೆಯನ್ನು ಪೂರೈಸಬಹುದು ( × )

ಬಿ ) ಸಂತುಲಿತ ಆಹಾರವನ್ನು ಸೇವಿಸುವ ಮೂಲಕ ರೋಗಗಳನ್ನು ತಡೆಗಟ್ಟಬಹುದು ( √ )

ಸಿ ) ಸಂತುಲಿತ ಆಹಾರವು ವಿವಿಧ ಆಹಾರ ಪದಾರ್ಥಗಳನ್ನು ಒಳಗೊಂಡಿರಬೇಕು ( √ )

ಡಿ ) ದೇಹಕ್ಕೆ ಎಲ್ಲಾ ಪೋಷಕಗಳನ್ನು ಒದಗಿಸಲು ಮಾಂಸ ಮಾತ್ರ ಸಾಕು ( × )


೫ . ಖಾಲಿ ಜಾಗಗಳನ್ನು ಭರ್ತಿ ಮಾಡಿ 

ಎ ) ವಿಟಮಿನ್-ಡಿ ಕೊರತೆಯಿಂದ __________ ರೋಗ ಉಂಟಾಗುತ್ತದೆ

ಉತ್ತರ :- ರಿಕೆಟ್ಸ್ 

ಬಿ )  ಬೇರಿಬೇರಿ ರೋಗವು ____________ ಕೊರತೆಯಿಂದ ಉಂಟಾಗುತ್ತದೆ

ಉತ್ತರ :- ವಿಟಮಿನ್ ಬಿ1

ಸಿ )  ವಿಟಮಿನ್-ಸಿ ಕೊರತೆಯು____________ ರೋಗವನ್ನು ಉಂಟುಮಾಡುತ್ತದೆ.

ಉತ್ತರ :- ಸ್ಕರ್ವಿ

ಡಿ )  ನಮ್ಮ ಆಹಾರದಲ್ಲಿ_____________ ನ ಕೊರತೆಯಿಂದ ಇರುಳು ಕುರುಡುತನ ಉಂಟಾಗುತ್ತದೆ.

ಉತ್ತರ :- ವಿಟಮಿನ್ ಎ


ಶುಕ್ರವಾರ, ಸೆಪ್ಟೆಂಬರ್ 24, 2021

6th ವಿಜ್ಞಾನ .1.ನಮಗೆ ಆಹಾರ ಎಲ್ಲಿಂದ ದೊರೆಯುತ್ತದೆ. ಪ್ರಶ್ನೋತ್ತರ

6th - ವಿಜ್ಞಾನ - ಅಧ್ಯಾಯ ೧ ಆಹಾರ - ಇದು ಎಲ್ಲಿಂದ ದೊರಕುತ್ತದೆ ? - ಪ್ರಶ್ನೋತ್ತರಗಳು


ಆಹಾರ - ಇದು ಎಲ್ಲಿಂದ ದೊರಕುತ್ತದೆ? 


 ~~~ : ಅಭ್ಯಾಸಗಳು :~~~


 ಪ್ರಶ್ನೆ1) ಎಲ್ಲಾ ಜೀವಿಗಳಿಗೂ ಒಂದೇ ತರಹದ ಆಹಾರ ಅವಶ್ಯ ಎಂದು ನೀನು ತಿಳಿದಿರುವಿರಾ ?

ಉತ್ತರ :-  ಇಲ್ಲ.  ಎಲ್ಲಾ ಜೀವಿಗಳಿಗೂ ಒಂದೇ ತರಹದ ಆಹಾರ ಅವಶ್ಯವಿರುವುದಿಲ್ಲ.  ಜೀವಿಗಳು ತಿನ್ನುವ ಆಹಾರ ಪದಾರ್ಥಗಳಲ್ಲಿ ಬಹಳಷ್ಟು ವೈವಿಧ್ಯತೆ ಇದೆ ಎಂಬುದನ್ನು ನಾವು ನೋಡಬಹುದು.


ಪ್ರಶ್ನೆ ೨)  :- ನಾವು ತಿನ್ನುವ ಐದು ಸಸ್ಯಗಳು ಮತ್ತು ತಿನ್ನುವ ಅವುಗಳ ಭಾಗಗಳನ್ನು ಹೆಸರಿಸಿ 

ಉತ್ತರ :- 

    (೧) ಬದನೆಕಾಯಿ ಗಿಡ - ಬದನೆಕಾಯಿ (ಕಾಯಿ)

     (೨) ಬಾಳೆ ಹಣ್ಣಿನ ಗಿಡ -  ಬಾಳೆಹಣ್ಣು (ಹಣ್ಣು )

     (೩) ಸೇಬಿನ ಮರ - ಸೇಬು ಹಣ್ಣು (ಕಾಯಿ & ಹಣ್ಣು )

     (೪) ಪಾಲಕ್ ಸಸ್ಯ - ಪಾಲಕ್ ಎಲೆ ( ಎಲೆ )

     (೫) ಶೇಂಗಾ ಗಿಡ. -  ಶೇಂಗಾ ಬೀಜ (ಬೀಜ )

ಪ್ರಶ್ನೆ ೪ :-  ಕೊಟ್ಟಿರುವ ಪದಗಳನ್ನು ತುಂಬಿ

( ಸಸ್ಯಹಾರಿ, ಸಸ್ಯ, ಹಾಲು , ಕಬ್ಬು ,  ಮಾಂಸಹಾರಿ )


ಎ) ಹುಲಿಯು  ಮಾಂಸಾಹಾರಿ ಏಕೆಂದರೆ ಇದು ಮಾಂಸವನ್ನು ಮಾತ್ರ ತಿನ್ನುತ್ತದೆ.


ಬಿ) ಜಿಂಕೆಯು ಸಸ್ಯ ಉತ್ಪನ್ನಗಳನ್ನು ಮಾತ್ರ ತಿನ್ನುತ್ತದೆ . ಆದ್ದರಿಂದ ಇದು ಸಸ್ಯಾಹಾರಿ


ಸಿ)  ಗಿಳಿಯು ಸಸ್ಯ ಉತ್ಪನ್ನಗಳನ್ನು ಮಾತ್ರ ತಿನ್ನುತ್ತದೆ .


ಡಿ )ಹಸುಗಳು ಹೆಮ್ಮೆಗಳು ಮತ್ತು ಮೇಕೆ ಗಳಿಂದ ದೊರೆತ ನಾವು ಕುಡಿಯುವ ಒಂದು ಪ್ರಾಣಿಜನ್ಯ ಉತ್ಪನ್ನ ಹಾಲು 


ಇ) ನಮಗೆ ಸಕ್ಕರೆಯು ದೊರೆಯುವ ಮೂಲ ಕಬ್ಬು


ಹೆಚ್ಚುವರಿ ಪ್ರಶ್ನೆಗಳು 


೧) ನಮ್ಮ ಆಹಾರದ ಮುಖ್ಯ ಮೂಲಗಳು ಯಾವವು 

ಉತ್ತರ :-  ನಮ್ಮ ಆಹಾರದ ಮುಖ್ಯ ಮೂಲಗಳು ಪ್ರಾಣಿಗಳು ಮತ್ತು ಸಸ್ಯಗಳು 


೨) ಸಸ್ಯಹಾರಿಗಳು ಎಂದರೇನು ?

ಉತ್ತರ :-  ಸಸ್ಯಗಳನ್ನು ಮಾತ್ರ ತಿನ್ನುವ ಪ್ರಾಣಿಗಳನ್ನು ಸಸ್ಯಹಾರಿಗಳು ಎನ್ನುವರು 


೩) ಮಾಂಸಾಹಾರಿಗಳು ಎಂದರೇನು ? 

ಉತ್ತರ :-  ಪ್ರಾಣಿಗಳನ್ನು ತಿನ್ನುವ ಪ್ರಾಣಿಗಳನ್ನು ಮಾಂಸಾಹಾರಿಗಳು ಎಂದು ಕರೆಯುತ್ತಾರೆ 


೪) ಮಿಶ್ರಾಹಾರಿಗಳು ಎಂದರೇನು ?

 ಉತ್ತರ :-ಸಸ್ಯಗಳನ್ನು ಮತ್ತು ಪ್ರಾಣಿಗಳನ್ನು ತಿನ್ನುವ ಪ್ರಾಣಿಗಳನ್ನು ಮಾಂಸಹಾರಿಗಳು ಎನ್ನುವರು.

ವೃತ್ತದ ಸುತ್ತಳತೆ ಮತ್ತು ವಿಸ್ತೀರ್ಣ ವಿಡೀಯೋಗಳು

        ವೃತ್ತದ ಸುತ್ತಳತೆ ಮತ್ತು ವಿಸ್ತೀರ್ಣ            YOU TUBE VIDEOS LINKS ಭಾಗ ೧ ವಿಡಿಯೊ ಭಾಗ ೨ ವಿಡಿಯೊ ಭಾಗ 3 ವಿಡಿಯೊ ಭಾಗ 4 ವಿಡಿಯೊ